ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿಯ ಸಂದರ್ಭದಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದವರನ್ನು ಒದ್ದು ಒಳಗೆ ಹಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿಯ ಸಂದರ್ಭದಲ್ಲಿ ಕೆಲವು ದೇಶದ್ರೋಹಿಗಳು ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದು, ಇವರು ಯಾರೆಂದು ಪೊಲೀಸರು ಪತ್ತೆ ಹಚ್ಚಿದ್ದಾರೆ. ಇಂಥ ದೇಶದ್ರೋಹಿಗಳನ್ನು ಒದ್ದು ಒಳಗೆ ಹಾಕಬೇಕೆಂದು ಮುಖ್ಯಮಂತ್ರಿಗಳಲ್ಲಿ ಹಾಗೂ ಗೃಹ ಸಚಿವರಲ್ಲಿ ಆಗ್ರಹಿಸುತ್ತೇನೆ ಎಂದು ತಿಳಿಸಿದರು.ಇಂಥ ಟಿಪ್ಪು, ಔರಂಗಬೇಬ್ ಮನಸ್ಥಿತಿ ಇರುವ ದೇಶದ್ರೋಹಿಗಳನ್ನು ಯಾವುದೇ ಕಾರಣಕ್ಕೆ ಕ್ಷಮಿಸಬಾರದು. ಇಂಥವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಅವರು ಒತ್ತಾಯಿಸಿದರು.
ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆಕ್ರಮಕ್ಕೆ ಬಿ.ವೈ.ವಿಜಯೇಂದ್ರ ಆಗ್ರಹಬೆಂಗಳೂರು
Share This Article
Leave a Comment




