By using this site, you agree to the Privacy Policy and Terms of Use.
Accept
anukshana.inanukshana.inanukshana.in
Notification Show More
Font ResizerAa
  • News
    • Karnataka
    • National
    • World
  • Bengaluru
  • Cinema
  • Budget 2026
  • Politics
  • Crime
  • epaper
  • Contact Us
Reading: ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಉಮೇಶ್ ಮೇಟಿ ಅವರನ್ನು ಗೆಲ್ಲಿಸಲೇಬೇಕು
Share
Font ResizerAa
anukshana.inanukshana.in
Search
  • Home
  • Bengaluru
    • GBA
    • BDA
    • Bengaluru City Police
    • Bengaluru Traffic Police
    • #SwachhSurvekshan2026
    • Census 2026
  • News
    • Karnataka
    • National
    • World
  • Districts
  • Cinema
  • Crime
  • Health
  • Politics
  • Sitemap
  • epaper
  • Contact Us
Have an existing account? Sign In
Follow US

ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಉಮೇಶ್ ಮೇಟಿ ಅವರನ್ನು ಗೆಲ್ಲಿಸಲೇಬೇಕು

Anukshana Media
Last updated: March 31, 2026 3:41 pm
Anukshana Media
Published: March 31, 2026

ಬಾಗಲಕೋಟೆಗೆ ಮೆಡಿಕಲ್ ಕಾಲೇಜು ಬರುತ್ತಿರುವುದು ಮೇಟಿಯವರ ಶ್ರಮದ ಫಲ: ಸಿಎಂ ಕರೆ

ಬಾಗಲಕೋಟೆ : ಎಚ್.ವೈ.ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಉಮೇಶ್ ಮೇಟಿ ಅವರನ್ನು ಗೆಲ್ಲಿಸಲೇಬೇಕು. ಬಾಗಲಕೋಟೆಗೆ ಮೆಡಿಕಲ್ ಕಾಲೇಜು ಬರುತ್ತಿರುವುದು ಮೇಟಿಯವರ ಶ್ರಮದ ಫಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬಾಗಲಕೋಟೆ ಉಪ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಸುತಗುಂಡಾರ, ನಾಯನೇಗಲಿ ಸೇರಿ ಸುತ್ತ ಮುತ್ತಲ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದರು.

ಮೇಟಿ ಅವರ ನಾಲ್ವರೂ ಮಕ್ಕಳು ಟಿಕೆಟ್ ಕೇಳಿದ್ದರು. ಆದರೆ, ಯಾರಿಗೇ ಕೊಟ್ಟರೂ ಒಟ್ಟಿಗೇ ಕೆಲಸ ಮಾಡುವ ಭರವಸೆ ನೀಡಿದರು. ಕಾಂಗ್ರೆಸ್ ಪದ್ಧತಿಯಂತೆ ಉಮೇಶ್ ಮೇಟಿ ಅವರಿಗೆ ಟಿಕೆಟ್ ಕೊಟ್ಟಿದ್ದೇವೆ. ಆದ್ದರಿಂದ ಇವರನ್ನು ಬೆಂಬಲಿಸಿ, ಗೆಲ್ಲಿಸಿ ಕಳುಹಿಸಿ ಎಂದರು.

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಆಲಮಟ್ಟಿ ವಿಚಾರದಲ್ಲಿ ಜನವಿರೋಧಿ ನಿಲುವು ಹೊಂದಿದೆ. ಹದಿಮೂರು ವರ್ಷಗಳಿಂದ ಗೆಜೆಟ್ ನೋಟಿಫಿಕೇಶನ್ ಕೂಡ ಮಾಡಲಿಲ್ಲ. ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗಲೂ ಭೂ ಪರಿಹಾರ ಘೋಷಿಸಿದರೂ ಹಣ ನೀಡಲಿಲ್ಲ. ನಾನು ಮುಖ್ಯಮಂತ್ರಿಯಾಗಿ ಎಕರೆ ನೀರಾವರಿ ಜಮೀನಿಗೆ 40ಲಕ್ಷ, ಒಣ ಭೂಮಿಗೆ 30 ಲಕ್ಷ ರೂ ಪರಿಹಾರ ಕೊಡುವ ತೀರ್ಮಾನ ಮಾಡಿ ಕೆಲಸ ಪ್ರಾರಂಭ ಮಾಡಿದ್ದು ಮೂರು ವರ್ಷದಲ್ಲಿ ಪರಿಹಾರ ಕೊಡುತ್ತೇವೆ ಎಂದು ಭರವಸೆ ನೀಡಿದರು.

ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಎಚ್.ವೈ.ಮೇಟಿಯವರ ಒತ್ತಾಯದಂತೆ ಬಾಗಲಕೋಟೆಗೆ ಮೆಡಿಕಲ್ ಕಾಲೇಜು ತರಲು ಶಂಕುಸ್ಥಾಪನೆ ಮಾಡಿದ್ದೇವೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮತ್ತು ಟ್ರಾಮಾ ಸೆಂಟರನ್ನೂ ನಾವು ಮಾಡುತ್ತೇವೆ. ನುಡಿದಂತೆ ಮಾಡುವ ಸರ್ಕಾರ ನಮ್ಮದು ಎಂದರು.

ಬಿಜೆಪಿಯವರು ನುಡಿದಂತೆ ನಡೆಯಲಿಲ್ಲ. ಒಂದೇ ಒಂದು ರೂಪಾಯಿ ರೈತರ ಸಾಲ ಮನ್ನಾ ಮಾಡಲಿಲ್ಲ. ಕೋವಿಡ್ ನಿಂದ ಬಳಲಿದ್ದ ರಾಜ್ಯದ ಜನತೆಗೆ ಅನುಕೂಲ ಮಾಡಿಕೊಡಲು ಐದು ಗ್ಯಾರಂಟಿಗಳನ್ನು ತಂದು ಜನರಿಗೆ ನೆರವಾಗಿದ್ದು ನಮ್ಮ ಸರ್ಕಾರ ಎಂದರು.

ಕೇಂದ್ರದ ಬಿಜೆಪಿ ಸರ್ಕಾರ ಕಬ್ಬು ಬಳೆಗೆ ರೈತರ ಬೇಡಿಕೆಯಷ್ಟು ಬೆಂಬಲ ಬೆಲೆ ನೀಡದಿದ್ದಾಗ ನಾನು ರೈತ ಸಂಘಟನೆಗಳು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸಿ 200 ರೂ ಹೆಚ್ಚು ಮಾಡಿದೆವು. ಎಚ್.ವೈ.ಮೇಟಿಯವರು ಜನರ ಕೈಗೆ ಸಿಗುತ್ತಿದ್ದರು. ಅಹಿಂದ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸುತ್ತಿದ್ದರು. ಆದರೆ ಅಧಿಕಾರದಲ್ಲಿದ್ದಾಗ ಜನರಿಗೆ ಸ್ಪಂದಿಸದೆ, ಈಗ ನಮ್ಮ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಯವರಿಗೆ ಮತ ಕೇಳುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ನಾವು ಪ್ರತೀ ವರ್ಷ 52 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯದ ಜನರ ಜೇಬಿಗೆ ಹಾಕುತ್ತಲೇ ಅಭಿವೃದ್ಧಿ ಕೆಲಸವನ್ನೂ ಮಾಡುತ್ತಿದ್ದೇವೆ.

ಬಿಜೆಪಿಯವರು ಕಳ್ಳೆತ್ತುಗಳು. ಗೇಯುವ ಎತ್ತಿಗೆ ತಾನೆ ಮೇವು ಹಾಕೋದು, ಹಾಗೆಯೇ ಕೆಲಸ ಮಾಡಿದ ನಮಗೆ ಕೂಲಿ ಕೊಡಿ ಎಂದರು.

ಎಚ್.ವೈ.ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಉಮೇಶ್ ಮೇಟಿ ಅವರನ್ನು ಗೆಲ್ಲಿಸಲೇಬೇಕು ಎಂದು ಕರೆ ನೀಡಿದರು.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಸ್ಲಿಂ ನಾಯಕರ ವಿರುದ್ಧ ಕ್ರಮ: ರಾಜಕೀಯ ಚರ್ಚೆಗೆ ಕಾರಣವಾದ ಬೆಳವಣಿಗೆ
ರಾಜ್ಯದಲ್ಲಿ ಟ್ಯಾಕ್ಸ್ ಟೆರರಿಸಂ ಶುರುವಾಗಿದೆ: ಬಸವರಾಜ ಬೊಮ್ಮಾಯಿ
ಗ್ರಾಮೀಣ ಜನರ ಉದ್ಯೋಗಕ್ಕಿಲ್ಲ ಖಾತ್ರಿ: ವಿಬಿ ಗ್ರಾಮ್ ಜಿ ಯೋಜನೆ ಜಾರಿಗೊಳಿಸುವ ಲಕ್ಷಣಗಳು ಕಾಣುತ್ತಿಲ್ಲ: ಪ್ರಿಯಾಂಕ್ ಖರ್ಗೆ ಕಳವಳ
ಅನ್ಯಾಯ ಮುಂದುವರಿದರೆ ಚುನಾವಣೆಯಲ್ಲಿ ಉತ್ತರ: ಕಾಂಗ್ರೆಸ್‌ಗೆ ಮುಸ್ಲಿಂ ನಾಯಕರ ಎಚ್ಚರಿಕೆ
ದಾವಣಗೆರೆ–ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಗೆಲುವಿಗೆ ನೂರಕ್ಕೆ ನೂರು ವಿಶ್ವಾಸ
Share This Article
Facebook
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Crime

ವಿಶಾಖ ಉಕ್ಕು ಕಾರ್ಖಾನೆ ದುರಂತ: ಕಾರ್ಮಿಕರ ಸಾವಿನ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಕುಮಾರಸ್ವಾಮಿ

Anukshana Media
Anukshana Media
June 9, 2026
ಇದು ಪ್ರಕಟಣೆಗೆ ಸೂಕ್ತವಾಗುವಂತೆ ಮರುರಚಿಸಲಾದ ಸುದ್ದಿ:
ಮತದಾರರ ಪಟ್ಟಿ ಪರಿಷ್ಕರಣೆಗೆ ಜೂನ್ 30ರಿಂದ ಮನೆ-ಮನೆ ಸಮೀಕ್ಷೆ
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ
ಸಂತೋಷ್ ಲಾಡ್‌ಗೆ ಡಿಸಿಎಂ, ಶ್ರೀನಿವಾಸ ಮಾನೆಗೆ ಸಚಿವ ಸ್ಥಾನ ನೀಡಲು ಸಕಲ ಮರಾಠ ಸಮಾಜ ಆಗ್ರಹ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Bengaluru

About US

Anukshana Kannada News is a Bengaluru-based digital news platform covering metro city updates with speed and accuracy. We proudly reach over 1 million readers, keeping the city informed every day.

Subscribe US

Subscribe to our newsletter to get our newest articles instantly!

© Foxiz News Network. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?